69
ಗಾಂಧಿನಗರ :ಉತ್ತರಾಖಂಡದಲ್ಲಿನ ಬಿಜೆಪಿ ಸರ್ಕಾರದ ಬಳಿಕ ಗುಜ ರಾತ್ನ ಬಿಜೆಪಿ ಸರ್ಕಾರ ಕೂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ಯೊಂದನ್ನು ಸರ್ಕಾರ ರಚಿಸಿದೆ
ನಿವೃತ್ತ ನ್ಯಾ. ರಂಜನಾ ದೇಸಾಯಿ ನೇತೃತ್ವದ ಐವರ ಸಮಿತಿ 45 ದಿನದಲ್ಲಿ ಏಕರೂಪದ ನಾಗರಿಕ ಸಂಹಿತೆಗೆ ಸಂಬಂಧಿಸಿದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಆ ಬಳಿಕ ಸರ್ಕಾರ ಕಾನೂನು ಜಾರಿಗೆ ಸಂಬಂಧಿಸಿದ ಮುಂದಿನ ನಿರ್ಧಾರ ತೆಗೆದುಕೊಳ್ಳ ಲಿದೆ ಎಂದು ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ.
ಈ ಸಮಿತಿಯು ಮುಸ್ಲಿಂ ಧಾರ್ಮಿಕ ನಾಯಕರೂ ಸೇರಿ ಎಲ್ಲಾ ವರ್ಗದ ಜನರನ್ನು ಭೇಟಿಯಾಗಿ ವರದಿ ಸಿದ್ದಪಡಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)