200
ಕಟಪಾಡಿ : ತ್ರಿಶಾ ಕ್ಲಾಸಸ್ ವತಿಯಿಂದ ಸಿಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ವೈಷ್ಣವಿ ಹೆಬ್ಬಾರ್ ಗೆ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 15 ರಂದು ನಡೆಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು .
ತ್ರಿಶಾ ಸಂಸ್ಥೆಯ ಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಹಾಗೂ ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿಯಾಗಿರುವ ನಮಿತಾ ಜಿ ಭಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರು ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರು ನಾರಾಯಣ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

