Home » ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ : ಐವರ ಬಂಧನ
 

ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ : ಐವರ ಬಂಧನ

by Kundapur Xpress
Spread the love

ಚಿಕ್ಕಮಗಳೂರು: ಅಂದಾಜು 1 ಕೋಟಿಗೂ ಅಧಿಕ ಮೌಲ್ಯದ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನ ಆಂಧ್ರ ಮೂಲದ ವಂಶಿಕೃಷ್ಣ, ಆರೀಫ್‌ ಬಾಷಾ ಹಾಗೂ ಕರ್ನಾಟಕ ಶಿವಮೊಗ್ಗ ಹಾಗೂ ತುಮಕೂರು ಮೂಲದ ಯತೀಶ್, ಷಫಿ ಹಾಗೂ ಆರೀಫ್ ಭಾಷಾ ಎಂದು ಗುರುತಿಸಲಾಗಿದೆ.

ಬಂಧಿತರಿಂದ 1 ಸ್ವಿಫ್ಟ್ ಕಾರು, 1 ವ್ಯಾಗ್ನರ್ ಕಾರು ಹಾಗೂ 5 ಮೊಬೈಲ್ ಗಳನ್ನ ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚನ್ನಗಿರಿಯಲ್ಲಿ ಸಿಕ್ಕ ಹಾವನ್ನ ಚಿಕ್ಕಮಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಸಿಐಡಿ ಅರಣ್ಯ ಸಂಚಾರ ದಳದ ಬಲೆಗೆ ಬಿದ್ದಿದ್ದಾರೆ.

ಆರೋಪಿ ಯತೀಶ್ ಪ್ರಕರಣದ ಕಿಂಗ್ ಪಿನ್ ಆಗಿದ್ದು ಆಂಧ್ರ ಮೂಲದ ವ್ಯಕ್ತಿಗಳಿಂದ ವಿದೇಶಕ್ಕೆ ಮಾರಾಟ ಮಾಡಲು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

 

Related Articles

error: Content is protected !!