62
ಮಂಗಳೂರು : ಜಾಮೀನಿನ ಮೇಲೆ ಬಿಡುಗಡೆಗೊಂಡ ಅನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಉಪ್ಪಳದ ಫಜಲ್ (31) ಬಂಧಿತ ಆರೋಪಿ. ಈತನ ವಿರುದ್ಧ ಎನ್ ಡಿ ಪಿ ಎಸ್ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. 2021 ರಲ್ಲಿ ಜಾಮೀನನ ಮೇಲೆ ಹೊರಗಡೆ ಬಂದಿದ್ದ ಅನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಿಸಿಕೊಂಡಿದ್ದ ಈತನನ್ನು ಜೂ.9ರಂದು ಉಪ್ಪಳದಿಂದ wo ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

