Home » ಸೈಕಲ್‌ಗೆ ಓಮ್ನಿ ಕಾರು ಡಿಕ್ಕಿ
 

ಸೈಕಲ್‌ಗೆ ಓಮ್ನಿ ಕಾರು ಡಿಕ್ಕಿ

by Kundapur Xpress
Spread the love

ಕುಂದಾಪುರ : ಸೈಕಲ್‌ಗೆ ಓಮ್ನಿ ಕಾರು ಡಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ಸಿದ್ದಾಪುರ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ನಡೆದಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಮಹಾಬಲ ಪೂಜಾರಿ (55) ಎಂದು ಗುರುತಿಸಲಾಗಿದೆ.

ಓಮ್ನಿ ಚಾಲಕ ವಾಸೀಂ ಎಂಬಾತನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುವನ್ನು ಹಾಲಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ತವ್ಯಕ್ಕೆ ಹೋಗುತ್ತಿದ್ದ ಹಾಲಾಡಿಯ ಪೊಲೀಸ್ ಸಿಬ್ಬಂದಿ ಶಶಿಧರ್ ಶೆಟ್ಟಿ ಗಾಯಾಳುವಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದರು. ಸ್ಥಳೀಯರಾದ ನಂದನ್, ಅರುಣ್ ಶೆಟ್ಟಿ ಮತ್ತು ರಾಜೇಶ್ ಅವರ ಸಹಾಯದಿಂದ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯುವ ಮೊದಲು ಗಾಯಾಳುಗಳನ್ನು ಹಾಲಾಡಿ ಆಸ್ಪತ್ರೆಗೆ ದಾಖಲಿಸಲಾಯಿತು.

 

Related Articles

error: Content is protected !!