79
ಉಪ್ಪಿನಂಗಡಿ: ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿ 16 ಮಂದಿಗೆ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಿನ ಶಿರಾಡಿ ಬಳಿ ನಡೆದಿದೆ. ಅಪಘಾತದಿಂದಾಗಿ ಸುಮಾರು 3 ಗಂಟೆ ಕಾಲ ವಾಹನಗಳ ಸಂಚಾರ ವ್ಯತ್ಯಯವಾಗಿತ್ತು.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ಗಳು ಮಧ್ಯೆ ಗುಂಡ್ಯ ಬಳಿ ಅಪಘಾತವಾಗಿವೆ. ಈ ವೇಳೆ ಬಸ್ನಲ್ಲಿದ್ದ 9 ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸದಲ್ಲಿದ್ದ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳ ಸಂಚಾರ ಸುಗಮಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

