Home » ಆಗುಂಬೆ ಘಾಟಿ ತಿರುವಿನಲ್ಲಿ ಭಾರೀ ಭೂ ಕುಸಿತ.
 

ಆಗುಂಬೆ ಘಾಟಿ ತಿರುವಿನಲ್ಲಿ ಭಾರೀ ಭೂ ಕುಸಿತ.

ಮರ ಬಿದ್ದು ವಾಹನ ಸಂಚಾರ ಸ್ಥಗಿತ.

by Kundapur Xpress
Spread the love

ಶಿವಮೊಗ್ಗ: ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾದ ಘಟನೆ‌  ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತ ವಾಗಿದ್ದು, ರಸ್ತೆ ಮೇಲೆ ಧರೆಯ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ.ಟ್ರಾಫಿಕ್ ಜಾಮ್ ಕೂಡ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.. ತೆರವು ಕಾರ್ಯಾಚರಣೆಗೆ ಮಳೆ ಅಡ್ಡಿ ಮಾಡುತ್ತಿದೆ. ಸಂಚಾರ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ.

 

Related Articles

error: Content is protected !!