Home » ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ
 

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ

by Kundapur Xpress
Spread the love

ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ಬೆಳಿಗ್ಗೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಸಂಭವಿಸಿದೆ.

ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು ಬೆಳಿಗ್ಗೆ 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ಮರಳುತ್ತಿದ್ದರು.ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತವಾಗಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ. ಆದರೆ, ಕೆಲವೇ ಕ್ಷಣಗಳಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗದೆ ಇಡೀ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಭಾಸ್ಕರ್ ಆಚಾರ್ ಸಮಯಕ್ಕೆ ಸರಿಯಾಗಿ ಕಾರಿನಿಂದ ಇಳಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಿಂದಾಗಿ ವಾಹನ ಸಂಪೂರ್ಣವಾಗಿ ನಾಶವಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.

 

Related Articles

error: Content is protected !!