Home » ಕಡವೆ ಬೈಕ್‌ ಮೇಲೆ ಹಾರಿದ ಘಟನೆ : ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ
 

ಕಡವೆ ಬೈಕ್‌ ಮೇಲೆ ಹಾರಿದ ಘಟನೆ : ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ

by Kundapur Xpress
Spread the love

ಕುಂದಾಪುರ: ದೇವಸ್ಥಾನಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದಾಗ ಬೈಕ್‌ವೊಂದರ ಮೇಲೆ ಕಡವೆ ಹಾರಿದ್ದು ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿದ್ದಾನೆ ಸಹಸವಾರ ಗಾಯಗೊಂಡ ಘಟನೆ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ.

ಮೃತಪಟ್ಟ ಬೈಕ್ ಸವಾರ ಕಾವ್ರಾಡಿ ಸಮೀಪದ ಶ್ರೇಯಸ್ ಮೊಗವೀರ (22) ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ಸಹಸವಾರ ಕಾವ್ರಾಡಿ ಪಡುವಾಲ್ತೂರಿನ ವಿಘ್ನೇಶ್ ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಬ್ಬರು ಸ್ನೇಹಿತರು  ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಮುಗಿಸಿ ವಾಪಸ್ಸಾಗುವಾಗ ತಾರೆಕೊಡ್ಲು ಸಮೀಪ ಕಡವೆಯೊಂದು ಬೈಕ್‌ಗೆ ಮೇಲೆ ಹಾರಿದೆ. ಇದರಿಂದ ಬೈಕ್ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ. ಬೈಕ್ ನಜ್ಜುಗುಜ್ಜಾಗಿದ್ದು ಕಡವೆ ಕೂಡ ಮೃತಪಟ್ಟಿದೆ. ಮೃತ ಶ್ರೇಯಸ್ ವಿದ್ಯಾಭ್ಯಾಸ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು ಎಂದು ತಿಳಿದುಬಂದಿದೆ.ಶಂಕರನಾರಾಯಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ

 

Related Articles

error: Content is protected !!