142
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಸೀತಾ ನದಿಯ ಡ್ಯಾಮ್ ಬಳಿ ಸ್ನಾನಕ್ಕೆ ಹೋದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
ಪಿರ್ಯಾಧಿ ಶಿವರಾಮ ರಾಯ (57) ನಡೂರು ಗ್ರಾಮ, ಬ್ರಹ್ಮಾವರ ಇವರ ತಂಗಿ ಪದ್ಮಾವತಿ ಇವರ ಮಗ ದೇವರಾಜ 35 ನಡೂರು ಬಳಿ ಇರುವ ಸೀತಾ ನದಿಯ ಡ್ಯಾಂ ಬಳಿ ದಿನಾಂಕ: 13/01/2026 ರಂದು ಸಂಜೆ ಸುಮಾರು 4:00 ಗಂಟೆಗೆ ಸ್ನಾನಕ್ಕೆ ಹೋದವರು ನದಿಯಲ್ಲಿ ಸ್ನಾನ ಮಾಡುತ್ತೀರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿದೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯು.ಡಿ.ಆರ್ 03/2026 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಘಟನೆ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

