Home » ಮಳಿಚಿಪ್ಪು ಹೆಕ್ಕುತಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು
 

ಮಳಿಚಿಪ್ಪು ಹೆಕ್ಕುತಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

by Kundapur Xpress
Spread the love

ಕುಂದಾಪುರ: ಅರಾಟೆ ಸೇತುವೆ ಬಳಿ ಹೊಳೆಯಲ್ಲಿ ಮಳಿಚಿಪ್ಪು ಹೆಕ್ಕುತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಹಂಗಳೂರಿನ ಚಂದ್ರ (39) ಎಂದು ಗುರುತಿಸಲಾಗಿದೆ.

ಚಂದ್ರ ಅವರು ತನ್ನ ಸಂಬಂಧಿಕ ಅಜಿತ್ ಅವರೊಂದಿಗೆ ಮಂಗಳವಾರ ಬೆಳಗ್ಗೆ 10ಗಂಟೆಗೆ ಅರಾಟೆ ಸೇತುವೆ ಬಳಿ ಮಳಿ ಹೆಕ್ಕಲು ಹೋಗಿದ್ದರು.ಕೆಲ ಹೊತ್ತಿನ ಬಳಿಕ ನೋಡಿದಾಗ ಚಂದ್ರ ಅವರು ಹೊಳೆಯಲ್ಲಿ ಕಾಣಿಸದೆ ಇದ್ದಾಗ ಅಜಿತ್ ಅವರಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು.

ಬುಧವಾರ ಬೆಳಗ್ಗೆ ಮತ್ತೆ ಹುಡುಕಾಡಿದಾಗ ಬೆಳಿಗ್ಗೆ 09:45 ಗಂಟೆಗೆ ಅರಾಟೆ ಬ್ರಿಡ್ಜ್‌ ಬಳಿ ನದಿಯಲ್ಲಿ ಚಂದ್ರ ಅವರ ಮೃತ ದೇಹ ತೇಲುತ್ತಿರುವುದು ಪತ್ತೆಯಾಯಿತು.ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!