67
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ರೈಲ್ವೇ ಹಳಿ ಬಳಿಯ ಕಲ್ಪನೆ ಎಂಬಲ್ಲಿ ನಿಷೇಧಿತ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಉತ್ತರ ಪ್ರದೇಶ ಮೂಲದ ಹರ್ದೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ನಿವಾಸಿ ರಾಜ್ ಪಾಲ್ ಬಂಧಿತ ಆರೋಪಿ.
ಆರೋಪಿ ರಾಜ್ ಪಾಲ್ ಉತ್ತರ ಪ್ರದೇಶದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಆರೋಪಿಯಿಂದ 21,000 ರೂಪಾಯಿ ಬೆಲೆಬಾಳುವ 425 ಗ್ರಾಂ ಗಾಂಜಾ 650/ ರೂ.ನಗದು, ಒಂದು ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನ ಪೊಲೀಸರು ವಶಪಡಿಸಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

