Home » ಉಡುಪಿ : ಭೀಕರ ರಸ್ತೆ ಅಪಘಾತ ಖ್ಯಾತ ಹುಲಿ ವೇಷ ಕಲಾವಿದ ಸ್ಥಳದಲ್ಲೇ ಸಾವು
 

ಉಡುಪಿ : ಭೀಕರ ರಸ್ತೆ ಅಪಘಾತ ಖ್ಯಾತ ಹುಲಿ ವೇಷ ಕಲಾವಿದ ಸ್ಥಳದಲ್ಲೇ ಸಾವು

by Kundapur Xpress
Spread the love

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್‌ಸೆಟ್ ಕ್ರಾಸಿಂಗ್ ಸಮೀಪ ಸಂಭವಿಸಿದೆ.

ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ (43) ಎಂದು ತಿಳಿಯಲಾಗಿದೆ. ಗೋವಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಇನ್ನೋವಾ ಕಾರಿನಲ್ಲಿ ಐವರು ಉಡುಪಿಗೆ ಹಿಂದಿರುಗುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಗದೂತ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಜುನಾಥ್ ಕರಾವಳಿಯ ಖ್ಯಾತ ಹುಲಿ ವೇಷದ ಕಲಾವಿದರಾಗಿದ್ದು, ಹಲವು ವರ್ಷಗಳಿಂದ ಹುಲಿ ವೇಷಧಾರಿಗಳಿಗೆ ಆಕರ್ಷಕ ಪೈಂಟಿಂಗ್‌ ಮಾಡುವ ಮೂಲಕ ಗುರುತಿಸಿಕೊಂಡಿದ್ದರು.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related Articles

error: Content is protected !!