ಉಡುಪಿ : ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನ

by Kundapur Xpress
Spread the love

ಉಡುಪಿ: ಉಡುಪಿ ನಗರ ಪೊಲೀಸರು ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ
ಅರುಣ್ ಎಸ್.ವಿ. ಮತ್ತು 19 ವರ್ಷದ ಕೌಶೀಕ್ ಬಂಧಿತ ಆರೋಪಿಗಳು. ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು, ಕಳವು ಮಾಡಿದ್ದ ಪಲ್ಸರ್ ಬೈಕ್‌ನಲ್ಲಿ ತೆರಳಿ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ 88.4 ಗ್ರಾಂ ಚಿನ್ನ, 1 ಕೆಜಿ 360 ಗ್ರಾಂ ಬೆಳ್ಳಿ, ವಿದೇಶಿ ಕರೆನ್ಸಿ, ನಗದು, ಮೊಬೈಲ್‌ಗಳು, ಆಟೋರಿಕ್ಷಾ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಡುಪಿ ನಗರ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಐದು ಪ್ರಕರಣಗಳಿಗೆ ಈ ಆರೋಪಿಗಳು ಸಂಬಂಧ ಹೊಂದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಪಿಎಸ್‌ಐ ಪ್ರಕಾಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

 

Related Articles

error: Content is protected !!