Home » ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸಿದ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನ ರಕ್ಷಣೆ
 

ಚಲಿಸುತ್ತಿದ್ದ ರೈಲಿನಿಂದ ಹೊರ ಜಿಗಿಯಲು ಯತ್ನಿಸಿದ ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನ ರಕ್ಷಣೆ

by Kundapur Xpress
Spread the love

ಉಡುಪಿ: ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ಚಲಿಸುತ್ತಿದ್ದ ರೈಲಿನ ಬಾಗಿಲಿನಿಂದ ಹೊರ ಜಿಗಿಯಲು ಯತ್ನಿಸುತ್ತಿದ್ದಾಗ, ಕರ್ತವ್ಯ ನಿರ್ವಸುತ್ತಿದ್ದ ತಪಾಸಣಾಧಿಕಾರಿ ಬಾಬು ಅವರ ಸಮಯಪ್ರಜ್ಞೆಯಿಂದ, ರಕ್ಷಿಸಲ್ಪಿಟ್ಟಿರುವ ಘಟನೆ ಇನ್ನಂಜೆಯಲ್ಲಿ ನಡೆದಿದೆ.

ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ರೈಲು, ಇನ್ನಂಜೆ ರೈಲು ನಿಲ್ದಾಣದ ಸಮೀಪ ಬಂದಾಗ ಘಟನೆ ನಡೆದಿದೆ. ಬಳಿಕ ಬಾಬು ಅವರು, ರಕ್ಷಿಸಿದ್ದ ಯುವಕನನ್ನು ಇಂದ್ರಾಳಿಯ ಆರ್ ಪಿ ಎಫ್ ಕಛೇರಿ ವಶಕ್ಕೆ ಒಪ್ಪಿಸಿದರು. ಯುವಕ ಮನೋರೋಗಿ ಎಂದು ತಿಳಿದು ಬಂದಿರುವುದರಿಂದ ರೈಲ್ವೆ ಪೋಲಿಸರು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರ ನೆರವು ಪಡೆದು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸುವ ವ್ಯವಸ್ಥೆಗೊಳಿಸಿದರು.

 

Related Articles

error: Content is protected !!