Home » ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ:ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
 

ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ:ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

by Kundapur Xpress
Spread the love

ಕಾರ್ಕಳ :ನಂದಳಿಕೆಯ ನಿವಾಸಿಯಾದಸುಮಂತ ದೇವಾಡಿಗ (16) ನಿಟ್ಟೆ ಕಾಲೇಜಿನಲ್ಲಿ ಮೊದಲನೇ ವರ್ಷದ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ಸುಮಂತನು ಮನೆಯಲ್ಲಿ ತನ್ನ ತಾಯಿಯೊಂದಿಗೆ ಹೊಸ ಮೊಬೈಲ್ ತೆಗೆದುಕೊಡಬೇಕೆಂದು ಜಗಳ ಮಾಡಿ ಮನೆ ಬಿಟ್ಟು ಹೋಗಿದ್ದು ಆತನನ್ನು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ.

ನ.13 ರಂದು ಸುಮಂತನನ್ನು ಹುಡುಕಾಡುತ್ತಿದ್ದಾಗ ಮಧ್ಯಾಹ್ನದ ಹೊತ್ತಿಗೆ ನಂದಳಿಕೆ ಗ್ರಾಮದ ಕೊಡ್ಸರಬೆಟ್ಟು ಎಂಬಲ್ಲಿ ಸೂರ್ಯಕಾಂತ ಶೆಟ್ಟಿ ಎಂಬುವವರ ಜಾಗದಲ್ಲಿರುವ ಕಲ್ಲಿನ ಕೋರೆಯ ನಿಂತ ನೀರಿನ ಬಳಿ ಆತನ ಚಪ್ಪಲಿ ಕಂಡುಬಂದಿದ್ದು ಅನುಮಾನಗೊಂಡು ನೀರಿನಲ್ಲಿ ಹುಡುಕಾಡಿದಾಗ ಆತನ ಮೃತದೇಹ ಪತ್ತೆಯಾಗಿರುತ್ತದೆ.

 

Related Articles

error: Content is protected !!