ಕುಂದಾಪುರ : ಬಿಜೆಪಿ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಆಚರಿಸಲ್ಪಟ್ಟಿದ್ದು,ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸರ್ವರನ್ನು ಸ್ವಾಗತಿಸಿದರು. ಬಿಜೆಪಿ ನಿಕಟಪೂರ್ವ ಎಸ್.ಸಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಗೋಪಾಲ್ ಕಳಂಜಿ ಪ್ರಾಸ್ತಾವಿಕ ಮಾತನಾಡಿ ತದನಂತರ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು, ಎಸ್ಸಿ ಮೋರ್ಚ ಉಪಾಧ್ಯಕ್ಷ ದಿನೇಶ್ ಸಟ್ವಾಡಿ, ಎಸ್ಸಿ ಮೋರ್ಚ ಕಾರ್ಯದರ್ಶಿ ಸುರೇಶ್ ಯು,ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಶಿರೂರು, ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ರೈತ ಮೋರ್ಚಾ ಅಧ್ಯಕ್ಷ ಜಯಶೀಲ ಶೆಟ್ಟಿ ,ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸೌರಭಿ ಪೈ, ಕಾರ್ಯದರ್ಶಿ ರೋಹಿಣಿ ಪೈ, ಒಬಿಸಿ ಕಾರ್ಯದರ್ಶಿ ನವೀನ್ ಕುಂದಾಪುರ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ, ಪುರಸಭಾ ಮಾಜಿ ಸದಸ್ಯ ರತ್ನಾಕರ ಶೇರಿಗಾರ್, ಕಾರ್ಯಾಲಯದ ಸಹಾಯಕಿ.ಆಶಾ ಮೊಗವೀರ, ಇನ್ನಿತರರು ಉಪಸ್ಥಿತರಿದ್ದರು.

