81
ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರದಿಂದ ರು. 5 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ತಿಳಿಸಿದ್ದಾರೆ.
ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಶಾಸಕ ವಿ. ಸುನಿಲ್ ಕುಮಾರ್ ರಸ್ತೆ ಅಭಿವೃದ್ಧಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದರು. ಶೀಘ್ರ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ವಿಕಾಸ ಜನಸೇವಾ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

