Home ಕರಾವಳಿ ಸುದ್ದಿಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತ : ಓರ್ವ ಸಾವು

ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತ : ಓರ್ವ ಸಾವು

by Kundapur Xpress

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತ ಪಟ್ಟರೆ, ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ  ‌ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

 

ಕುಂದಾಪುರದಿಂದ ಆಜಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಬಸ್ ನ ಬಲ ಬದಿಗೆ ಡಿಕ್ಕಿ ಹೊಡೆದಿದ್ದರಿಂದ ಚಾಲಕನ ಬದಿಯ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ.

ಸಂಜೆ ಸಮಯವಾದ್ದರಿಂದ ಬಸ್ ನಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಿದ್ದು, ಅವರಿಗೆಲ್ಲ ಗಂಭೀರ ಗಾಯಗಳಾಗಿದೆ. ಸ್ಥಳೀಯ ಯುವಕ ಪ್ರಶಾಂತ್ ಪೂಜಾರಿ ಕರ್ಕಿ ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

Related Articles