60
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಉಡುಪಿ ಬಸವ ಸಮಿತಿ (ರಿ.) ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.) ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ದಿನಾಂಕ ಎಂ.ಜಿ.ಎಂ ಕಾಲೇಜು ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ “ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಜಯಂತಿ – 2025” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಉಡುಪಿ ಬಸವ ಸಮಿತಿ (ರಿ.), ಉಡುಪಿ ಜಿಲ್ಲೆ ಗೌರವಾಧ್ಯಕ್ಷರಾದ ಡಾ. ಜಿ.ಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು.

