ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ ಡಿಸೆಂಬರ್ 25ರಂದು ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ SWAYAM ಕೋರ್ಸ್ನ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿಯರು ಹೆಚ್ಚುವರಿ ಕೋರ್ಸ್ ಗಳಿಂದಷ್ಟೇ ಜಾಗತಿಕ ಮಾರುಕಟ್ಟೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಥಮ ಹಾಗೂ ದ್ವಿತೀಯ ವರ್ಷದ ಸುಮಾರು 1200 ವಿದ್ಯಾರ್ಥಿಗಳಿಗೆ NPTELನ ವಿವಿಧ SWAYAM ಕೋರ್ಸ್ಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮ ಸಂಯೋಜಕರಾದ ಶ್ರೀಕಾಂತ್ ಕಣಿಯಾರ್ ವಿಶಿಷ್ಟ ಶ್ರೇಣಿಯಲ್ಲಿ ಸಾಧನೆಗೈದವರ ಪಟ್ಟಿಯನ್ನು ವಾಚಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಮತ್ತು ಕಾರ್ಯಕ್ರಮ ಸಂಯೋಜಕರಾದ ರಶ್ಮಿ ಗಾವಡಿ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಬಿಸಿಎ ವಿದ್ಯಾರ್ಥಿಗಳಾದ ಅಪೂರ್ವ ಸ್ವಾಗತಿಸಿ, ಸಿಂಚನಾ ಅತಿಥಿಗಳನ್ನು ಪರಿಚಯಿಸಿ, ರೈನಲ್ ವಂದಿಸಿ, ಸಾನಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.

