Home » ಮಹಾ ಸಂಪರ್ಕ ಅಭಿಯಾನ ಯಶಸ್ವಿ
 

ಮಹಾ ಸಂಪರ್ಕ ಅಭಿಯಾನ ಯಶಸ್ವಿ

by Kundapur Xpress
Spread the love

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಪ್ರಕ್ರಿಯೆ ಬಿರುಸುಗೊಂಡಿದ್ದು ಭಾನುವಾರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಸಕರು ಸಹಿತವಾಗಿ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಹಾ ಸಂಪರ್ಕ ಅಭಿಯಾನ ನಡೆಸಿದರು.
ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಬೇಕು ಎಂಬ ಸಂಕಲ್ಪದೊಂದಿಗೆ ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಬೂತ್ ಕಡೆಗೆ ಸಮೃದ್ಧ ನಡೆಗೆ ಯಶಸ್ವಿಯಾಗಿ ನಡೆಸಿದ್ದಾರೆ. ವಿವಿಧ ಸಮುದಾಯಗಳ ಸಮಾವೇಶ, ಮಹಿಳಾ ಸಮಾವೇಶ, ಯುವ ಸಮಾವೇಶ ಹೀಗೆ ಹಲವು ಸಮಾವೇಶಗಳು ನಡೆದಿವೆ


ಭಾನುವಾರ ಎಲ್ಲ ಬೂತ್ ಗಳಲ್ಲೂ ಮಹಾ ಸಂಪರ್ಕ ಅಭಿಯಾನ ದ ಅಂಗವಾಗಿ ಕಾರ್ಯಕರ್ತರು, ಮುಖಂಡರು ಮನೆಮನೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿದರು.
ಶಾಸಕರಾದ ಗುರುರಾಜ ಗಂಟಿಹೊಳೆಯವರು ಬಿಜೂರು, ಕಂಚಿಕಾನ್ ಸೇರಿದಂತೆ ಹಲವು ಬೂತ್ ಗಳಲ್ಲಿ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾದ ಮಾಜಿ ಶಾಸಕರಾದ ರಘುಪತಿ ಭಟ್ ಅವರು ಬೈಂದೂರು, ಶಿರೂರು ವ್ಯಾಪ್ತಿಯಲ್ಲಿ ಕಾರ್ಯಕರ್ತರೊಂದಿಗೆ ಮನೆಮನೆಗೆ ಭೇಟಿ ನೀಡಿ ಬಿಜೆಪಿಗೆ ಮತ ಹಾಕುವಂತೆ ಮನವಿ ಮಾಡಿದರು. ಮಂಡಲದ ಪದಾಧಿಕಾರಿಗಳು, ಮುಖಂಡರು ಮಹಾ ಅಭಿಯಾನದಲ್ಲಿ ಪಾಲ್ಗೊಂಡು ಮನೆಮನೆಗೆ ಬಿಜೆಪಿಯ ಸಾಧನೆಯ ಸಂದೇಶವನ್ನು ತಲುಪಿಸಿ, ಬಿಜೆಪಿ ಅಭ್ಯರ್ಥಿಯನ್ನು ದಾಖಲೆ ಅಂತರದಲ್ಲಿ ಗೆಲ್ಲಿಸಲು ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಸಹಕರಿಸುವಂತೆ ಕೋರಿಕೊಂಡರು.

ಎಲ್ಲೆಡೆ ಬಿಜೆಪಿ ಮತ್ತು ನರೇಂದ್ರ ಮೋದಿ ಅವರ ಅಲೆ ಕಾಣಸಿಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಹಾಗೂ ಅಭಿವೃದ್ಧಿ ಕಾರ್ಯಗಳು ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿ. ವೈ. ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಅನೇಕರು ಬಿಜೆಪಿಯೊಂದಿಗೆ ಜೋಡಿಸಿಕೊಳ್ಳುತ್ತಿದ್ದಾರೆ.
ಭಾನುವಾರ ಮಹಾ ಸಂಪರ್ಕ ಅಭಿಯಾನ ಯಶಸ್ವಿಯಾಗಿ ನಡೆದಿದೆ. ಎಲ್ಲ ಬೂತ್ ಗಳಲ್ಲೂ ಸಾವಿರಾರು ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಬಿಜೆಪಿಯ ಸಾಧನೆಯನ್ನು ತಲುಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಮನವಿ ಮಾಡಿಕೊಂಡಿದ್ದಾರೆ ಎಂದು ಬೈಂದೂರು ಮಂಡಲ ಬಿಜೆಪಿ ಪ್ರಕಟಣೆ ತಿಳಿಸಿದೆ

   

Related Articles

error: Content is protected !!