Home » ಎಂ.ಕೆ. ವಾಸುದೇವ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ಸಂತಾಪ
 

ಎಂ.ಕೆ. ವಾಸುದೇವ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ಸಂತಾಪ

by Kundapur Xpress
Spread the love

ಉಡುಪಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ, ನಿವೃತ್ತ ಶಿಕ್ಷಕರು, ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿತ್ವದ ಹಿರಿಯರು, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತೀರ್ಥರೂಪರಾದ ಎಂ.ಕೆ. ವಾಸುದೇವ  ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಮೃತರ ಆತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಪುತ್ರ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

error: Content is protected !!