159
ಸಾಲಿಗ್ರಾಮ : ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಅಶಕ್ತರಿಗೆ ವೈದ್ಯಕೀಯ ನೆರವು
ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಮುಖೇನ ಪಾರಂಪಳ್ಳಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾಕ೯ಡ ಗ್ರಾಮದ ಚಂದ್ರಶೇಖರ ಸೋಮಯಾಜಿ ಇವರ ಪತ್ನಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯವನ್ನು ಕಾಕ೯ಡದಲ್ಲಿ ನಡೆದ ಸರಳ ಸಮಾರಂಭದಲ್ಲಿ ಚಕ್ನ್ನು ಹಸ್ತಾಂತರಿಸಲಾಯಿತು.
ಟ್ರಸ್ಟಿಗಳಾದ ಪಾರಂಪಳ್ಳಿ ಸದಾಶಿವ ಮಧ್ಯಸ್ಥ, ಸಭಾದ ಅಧ್ಯಕ್ಷ ಯಂ.ಶಿವರಾಮ ಉಡುಪ, ಉಪಾಧ್ಯಕ್ಷರಾದ ಪಟ್ಟಾಭಿರಾಮ ಸೋಮಯಾಜಿ, ಸುಬ್ರಾಯ ಉರಾಳ, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸಭಾದ ಕಾರ್ಯದರ್ಶಿ ಕೆ. ರಾಜಾರಾಮ ಐತಾಳ ಸ್ವಾಗತಿಸಿ ವಂದಿಸಿದರು.

