Home » ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ
 

ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ

ಮೀನುಗಾರರಿಗೆ ಲೈಫ್ ಜಾಕೆಟ್ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

by Kundapur Xpress
Spread the love

ಬೈಂದೂರು : ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೈಂದೂರು ಕ್ಷೇತ್ರದ ಮೀನುಗಾರರಿಗೆ ಲೈಫ್ ಜಾಕೆಟ್ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು ಮಾನವನ ಜೀವ ಅತ್ಯಮೂಲ್ಯವಾದದ್ದು, ಇಂದಿನ ದಿನಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊಟ್ಟೆಪಾಡಿಗಾಗಿ ಮೀನುಗಾರಿಕೆಯಲ್ಲಿ ತೊಡಗಿರುವ ಸಮಯ ದುರ್ಘಟನೆಗಳಾಗಿ ಜೀವ ಕಳೆದು ಕೊಳ್ಳುವ ಸಂದರ್ಭಗಳನ್ನು ಕಾಣುತ್ತಿದ್ದೇವೆ.ಇದು ಅತ್ಯಂತ ದುರಾದೃಷ್ಟಕರ ಸಂಗತಿ.ಹಾಗಾಗಿ ಈ ಸಾಲಿನ ಸಮುದ್ರ ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಸಂಪ್ರದಾಯಿಕ ಮೀನುಗಾರಿಕೆಯಲ್ಲಿ ಹಾಗೂ ನದಿ ಪಾತ್ರಗಳಲ್ಲಿ ಇನ್ನಿತರ ಕೆಲಸಗಳಲ್ಲಿ ತೊಡಗಿ ಕೊಳ್ಳುವ ಮೀನುಗಾರ ಬಾಂಧವರು ಅತ್ಯಂತ ಜಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಮನವಿ ಮಾಡಿದರು. ಲೈಫ್ ಜಾಕೆಟ್ ಸಾಕಷ್ಟು ಸಂಖ್ಯೆಯಲ್ಲಿ ವಿತರಣೆ ಆಗಿದ್ದು, ಅದನ್ನು ಪಡೆದು ಕೊಂಡವರು ಅದರ ಸದ್ಭಬಳಕೆ ಮಾಡಲು ಕರೆ ನೀಡಿದರು.

ಮೀನುಗಾರರಿಗೆ ಲೈಫ್ ಬಾಯ್ ಒದಗಿಸಲು ಅಧಿಕಾರಿಗಳಿಗೆ ಸೂಚನೆ :

ಪ್ರಸ್ತುತ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಲೈಫ್ ಜಾಕೆಟ್ ವಿತರಿಸಲಾಗಿದೆ. ಕೆಲವು ಕಡೆ ಮೀನುಗಾರರಿಂದ ಲೈಫ್ ಬಾಯ್ ಒದಗಿಸಲು ಬೇಡಿಕೆ ಇರುವುದಾಗಿದೆ. ಹಾಗಾಗಿ ಮುಂದಿನ ಬಾರಿ ಮೀನುಗಾರರ ಬೇಡಿಕೆಯಂತೆ ಲೈಫ್ ಬಾಯ್ ಒದಗಿಸಲು ಅಗತ್ಯ ಕ್ರಮವಹಿಸಲು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಹಾಗೂ ಇತರೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

 

Related Articles

error: Content is protected !!