134
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಸೋಮವಾರ ಮಂಗಳೂರಿಗೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಕುರಿತು ಪಕ್ಷದ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

