Home » ಗಾಂಜಾ ಸೇವನೆ :ಆರೋಪಿ ಬಂಧನ
 

ಗಾಂಜಾ ಸೇವನೆ :ಆರೋಪಿ ಬಂಧನ

by Kundapur Xpress
Spread the love

ಮಂಗಳೂರು: ನಗರದ ಕೋರ್ಟ್ ರಸ್ತೆಯಲ್ಲಿ ತೂರಾಡುತ್ತಾ ಸಾಗುತ್ತಿದ್ದ ಬೆಂಗಳೂರು ಅಂದ್ರಹಳ್ಳಿಯ 10ನೇ ಕ್ರಾಸ್ ನಿವಾಸಿ ದರ್ಶನ್ (25) ಎಂಬಾತನನ್ನು ಗಾಂಜಾ ಸೇವನೆ ಮಾಡಿದ ಆರೋಪದಡಿ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಎಸ್ಸೈ ಫೈಜುನ್ನಿಸಾ ಕೋರ್ಟ್ ರಸ್ತೆಯಲ್ಲಿ ವಾಹನದಲ್ಲಿ ಸಾಗುತ್ತಿರುವಾಗ ತೂರಾಡುತ್ತಾ ಸಾಗುತ್ತಿದ್ದ ವ್ಯಕ್ತಿಯನ್ನು ನಿಲ್ಲಿಸಿ ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ.

ಅದರಂತೆ ಆತನ ವಿರುದ್ಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Related Articles

error: Content is protected !!