118
ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಸಂಭವಿಸಿದೆ.
ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ. ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್ ನನ್ನು ರಕ್ಷಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಥುನ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧಕಾರ್ಯ ಮುಂದುವರಿದಿದೆ.

