ಕುಂದಾಪುರ : ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕುಂದಾಪುರ ವಲಯದ 10ನೇ ತರಗತಿ ಮಕ್ಕಳಿಗೆ ಆಯೋಜಿಸಿರುವ ಪ್ರೇರಣಾ ಶಿಬಿರ ಸಮಯೋಚಿತ. ಇದರಿಂದ ಮಕ್ಕಳು ಪರೀಕ್ಷೆ ಎದುರಿಸಲು ಅನುಕೂಲವಾಗುತ್ತದೆ ಎಂದು ಹೊಂಬಾಡಿ- ಮಂಡಾಡಿ ಗ್ರಾಮ ಪಂಚಾಯಿತಿ ಉಪಾ ಧ್ಯಕ್ಷ ಅರುಣ್ ಕುಮಾರ ಹೆಗ್ಡೆ ಹೇಳಿದರು.
ಶುಕ್ರವಾರ ಬೆಳಗ್ಗೆ ಸುಣ್ಣಾರಿ ಎಕ್ಸಲೆಂಟ್ ವಿದ್ಯಾಲಯದ ವಠಾರದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕಿನ 10ನೇ ತರಗತಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು
ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ.ಮಹೇಶ್ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂತಹದೊಂದು ಶಿಬಿರ ನಮ್ಮ ವಿದ್ಯಾಲಯದಲ್ಲಿ ಆಯೋಜನೆ ಆಗುತ್ತಿರು ವುದು ಸಂತಸ ನೀಡಿದೆ. ಮುಂದೆ ಬರಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 600 ಕ್ಕಿಂತ ಹೆಚ್ಚು ಅಂಕ ಪಡೆಯುವ ಸರಕಾರಿ ಪ್ರೌಢಶಾಲೆಯ 50 ವಿದ್ಯಾರ್ಥಿಗಳಿಗೆ ನಮ್ಮ ವಿದ್ಯಾಲಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದರು
ಸರಕಾರಿ ಪದವಿ ಪೂರ್ವ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಕಿರಣ್ ಹೆಗ್ಡೆ ಶುಭ ಹಾರೈಸಿದರು. ಕೋಟೇಶ್ವರ ಕೆಪಿಎಸ್ ಸ್ಕೂಲ್ ವೈಸ್ ಪ್ರಿನ್ಸಿಪಾಲ್ ಚಂದ್ರಶೇಖರ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಾಗ್ಮಿ ಹಾಗೂ ಲೇಖಕ ಸಿ.ಎ.ಗೋಪಾಲಕೃಷ್ಣ ಭಟ್, ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಯೋಗ ನರಸಿಂಹ ಸ್ವಾಮಿ, ತಾಲೂಕು ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ದುಲ್ ರವೂಫ್, ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ನಾಗರಾಜ ಶೆಟ್ಟಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉದಯಕುಮಾರ ಶೆಟ್ಟಿ ಉಪಸ್ಥಿತ ರಿದ್ದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಸ್ವಾಗತಿಸಿದರು. ಸುಣ್ಣಾರಿ ಎಕ್ಸಲೆಂಟ್ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸರೋಜಿನಿ ಆಚಾರ್ಯ ವಂದಿಸಿದರು

