Home » ‘ಮ್ಯಾನೇಜ್‌ಮೆಂಟ್ ಪೆಸ್ಟ್-೨೦೨೫’:ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ
 

‘ಮ್ಯಾನೇಜ್‌ಮೆಂಟ್ ಪೆಸ್ಟ್-೨೦೨೫’:ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ

by Kundapur Xpress
Spread the love

ಎಕ್ಸಲೆಂಟ್ ಕುಂದಾಪುರ: ಅಂತರ್ ಕಾಲೇಜು ಮಟ್ಟದ ಮ್ಯಾನೇಜ್‌ಮೆಂಟ್ ಪೆಸ್ಟ್ನಲ್ಲಿ ಸಮಗ್ರ ರನ್ನರ್‌ಅಫ್ ಪ್ರಶಸ್ತಿ.
“ಆರುಣ್ಯ-೨೦೨೫” ಶ್ರೀ ಶಾರದಾ ಕಾಲೇಜು, ಬಸ್ರೂರು ಇವರ ಆಶ್ರಯದಲ್ಲಿ ನಡೆದ ‘ಮ್ಯಾನೇಜ್‌ಮೆಂಟ್ ಪೆಸ್ಟ್-೨೦೨೫’ ಉಡುಪಿ ಜಿಲ್ಲಾ ಅಂತರ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ರನ್ನರ್ ಅಫ್ ಪ್ರಶಸ್ತಿಯನ್ನು ನಮ್ಮ ಹೆಮ್ಮೆಯ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. ಶ್ರೀ ಶಾರದಾ ಕಾಲೇಜು ಬಸ್ರೂರು ನಡೆದ ಪ್ರತಿ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ನಾಲ್ಕು ಚಿನ್ನದ ಪದಕ ಹಾಗೂ ನಾಲ್ಕು ರಜತದ ಪದಕಗಳೊಂದಿಗೆ ಒಟ್ಟಾರೆ ಎಂಟು ಪದಕಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಅತ್ಯುತ್ತಮ ರನ್ನರ್‌ಅಫ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ರೀತಿ ಸಾಧನೆಯನ್ನು ಮಾಡಿದ ನಮ್ಮ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಪ್ರಾಂಶುಪಾಲರು, ಬೋಧಕ- ಬೋಧಕೇತರ ವರ್ಗದವರು ಶುಭಹಾರೈಸಿದ್ದಾರೆ.

 

Related Articles

error: Content is protected !!