Home » ಗಮ್ಮತ್ತಿಗೆ ಆಟ ಗಂಜಿ ಊಟ ಕಾರ್ಯಕ್ರಮ
 

ಗಮ್ಮತ್ತಿಗೆ ಆಟ ಗಂಜಿ ಊಟ ಕಾರ್ಯಕ್ರಮ

ಸಮಾಜಸೇವಕ ಹರ್ತಟ್ಟು ಮಂಜುನಾಥ ಪೂಜಾರಿಗೆ ಸನ್ಮಾನ

by Kundapur Xpress
Spread the love

ಕೋಟ : ಶ್ರೀ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಕೋಟದ ಹರ್ತಟ್ಟು ಗಿಳಿಯಾರು ನಾಗರಿಕರ ಆಶ್ರಯದಲ್ಲಿ ಗಮ್ಮತ್ತಿಗೆ ಆಟ ಗಂಜಿ ಊಟ ಎಂಬ ಗ್ರಾಮೀಣ ಸೋಗಡುಗಳ ಅನಾವರಣ ಕಾರ್ಯಕ್ರಮದಲ್ಲಿ ಸಮಾಜಸೇವಕ ಮಂಜುನಾಥ ಪೂಜಾರಿ ಹರ್ತಟ್ಟು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಾರಕೂರು ಶಾಂತರಾಮ ಶೆಟ್ಟಿ, ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ,ಸದಸ್ಯ ಚಂದ್ರ ಆಚಾರ್,ಕೋಟದ ಶನೀಶ್ವರ ದೇಗುದ ಧರ್ಮದರ್ಶಿ ಭಾಸ್ಕರ್ ಸ್ವಾಮಿ,ಕೋಟ ಮಹಾಲಿಂಗೇಶ್ವರ ದೇಗುಲದ ಮಾಜಿ ಟ್ರಸ್ಟಿ ಜಿ.ಎಸ್ ಆನಂದ ದೇವಾಡಿಗ,ಕೃಷಿಕ ಹಾಡಿಕೆರೆ ಚಂದ್ರಣ್ಣ, ಸಂಘಟಕರಾದ ತಿಮ್ಮ ಕಾಂಚನ್,ಶೇಖರ್ ದೇವಾಡಿಗ,ಶ್ರೀಧರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು

 

Related Articles

error: Content is protected !!