ಬೈಂದೂರು : ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವೀಕರಿಸಲಾಗುವ ಅರ್ಜಿಗಳನ್ನು ತ್ವರಿತ ವಾಗಿ ವಿಲೇವಾರಿ ಪಡಿಸುವುದಾಗಿ ಭರವಸೆ ನೀಡಿದ ಕೃಷಿ ಸಚಿವರು
ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾಯಕದಲ್ಲಿ ತೊಡಗುವ ರೈತರು ಮೃತ ಪಟ್ಟಲ್ಲಿ ಅವರ ಅವಲಂಬಿತರಿಗೆ ಪರಿಹಾರ ಮೊತ್ತ ಪಾವತಿಸಲು ವಿಳಂಬ ವಾಗುತ್ತಿರುವ ವಿಚಾರ ಸರಕಾರದ ಗಮನದಲ್ಲಿದೆಯೇ? ಹಾಗೂ ಈ ಬಗ್ಗೆ ತುರ್ತು ಪರಿಹಾರಗಳನ್ನು ಒದಗಿಸಲು ಸರಕಾರ ಅಗತ್ಯ ಕ್ರಮ ವಹಿಸಲು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿ ಹೊಳಯವರು ಕೇಳಿದ ಚುಕ್ಕೆ ರಹಿತ ಪ್ರಶ್ನೆಗೆ ರಾಜ್ಯದ ಕೃಷಿ ಸಚಿವರಾದ ಶ್ರೀ ಚಲುವರಾಯ ಸ್ವಾಮಿ ಯವರು ಪ್ರಸ್ತುತ ಆರ್ಥಿಕ ಇಲಾಖೆಯ ಟಿಪ್ಪಣಿ ಸಂ:ಆ ಇ 956 ವೆಚ್ಚ 7/2025 ದಿನಾಂಕ: 06-11-2025 ರನ್ವಯ ರೈತರ ಆತ್ಮ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ನಡೆದ ದಿನಾಂಕದಿಂದ 9 ತಿಂಗಳ ಒಳಗಾಗಿ ಇತ್ಯರ್ಥ ಪಡಿಸಿ ಪಾವತಿಸಲು ಹಾಗೂ ಆಕಸ್ಮಿಕ ಮರಣ ಮತ್ತು ಬಣವೆ ನಷ್ಟ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಪ್ರಕರಣ ನಡೆದ ದಿನಾಂಕದಿಂದ 6 ತಿಂಗಳ ಒಳಗಾಗಿ ಇತ್ಯರ್ಥ ಪಡಿಸಿ ಪಾವತಿಸಲು ಆದೇಶಿಸಲಾಗಿದೆ. ಅಲ್ಲದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವೀಕರಿಸುವ ಪತ್ರ ವನ್ನು ಆದ್ಯತೆ ಮೇರೆಗೆ ಪರಿಗಣಿಸಿ ಇತ್ಯರ್ಥವಾಗುವಂತೆ ಅಗತ್ಯ ಕ್ರಮ ಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.
ಅಂಕಿ ಅಂಶಗಳು:
ಕಳೆದ ಎರಡು ವರ್ಷಗಳಲ್ಲಿ ಕೃಷಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ 1635 ಮೃತ ಪ್ರಕರಣ ದಾಖಲಾಗಿದೆ.
2024-25 ಹಾಗೂ ಅದರ ಹಿಂದಿನ 339 ಪ್ರಕರಣಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆ ಹಾಗೂ ಸರಕಾರದ ಆದೇಶದ ಅನುಸಾರ ಪರಿಹಾರ ಮೊತ್ತ ವಿತರಿಸಲು ಅವಕಾಶವಿಲ್ಲವೆಂದು ತಿಳಿಸಲಾಗಿದೆ.
2025-26 ನೇ ಸಾಲಿನಲ್ಲಿ ರಾಜ್ಯದಲ್ಲಿ ಘಟಿಸಿದ 163 ಪ್ರಕರಣಗಳ ಪೈಕಿ 86 ಪ್ರಕರಣಗಳಿಗೆ ಪರಿಹಾರ ನೀಡಲು ಬಾಕಿ ಇರುವ ವಿಚಾರ ಶಾಸಕರ ಪ್ರಶ್ನೆ ಯಿಂದ ಬಹಿರಂಗ ಗೊಂಡಿದೆ.

