109
ಉಡುಪಿ : ಕರಾವಳಿ ಕರ್ನಾಟಕದ ಇತಿಹಾಸ ಪ್ರಸಿದ್ಧವಾದ ಕಾಪುವಿನ ಮಾರಿಯಮ್ಮನ ಸನ್ನಿಧಾನವು ನವೀಕರಣಗೊಂಡು ಅದ್ಬುತವಾಗಿ ಕಂಗೊಳಿಸುತ್ತಿದ್ದು, ಇದರ ಬ್ರಹ್ಮಕಲಶೋತ್ಸವದ ಎರಡನೇ ದಿನ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ದರ್ಶನ ಪಡೆದರುಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರು ಹಾಗೂ ಪ್ರಸ್ತುತ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಮುಖರಾದ ಗೀತಾಂಜಲಿ ಸುವರ್ಣ, ಬಿಜೆಪಿ ಜಿಲ್ಲಾ ಯುವ ಮೋರ್ಚ ಪ್ರಮುಖ ಅಭಿರಾಜ್ ಸುವರ್ಣ,ಮತ್ತು ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

