ಮೂಡ್ಲಕಟ್ಟೆ : ಮೂಡ್ಲಕಟ್ಟೆ ಪದವಿ ಕಾಲೇಜಿನ ಅಂತಿಮ ಬಿಸಿಎ ಪದವಿಯಲ್ಲಿ ಓದುತ್ತಿರುವ ಕಾಲೇಜಿನ ಪ್ರಥಮ ಬ್ಯಾಚನ 8 ವಿದ್ಯಾರ್ಥಿಗಳು ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಐ.ಟಿ ಕಂಪನಿಯಾದ ಟಿ.ಸಿ.ಎಸ್ ಗೆ ಆಯ್ಕೆಗೊಂಡಿರುತ್ತಾರೆ.
ಎರಡು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ತೋರಿದ ವಿದ್ಯಾರ್ಥಿನಿಯರಾದ ನೇತ್ರಾವತಿ ದೇವಾಡಿಗ, ತಸ್ಮಿ ಹೆಗ್ಡೆ, ಕೀರ್ತನ, ಪ್ರತಿಭಾ, ಹಾಗು ನಿರೋಷ ಮತ್ತು ವಿದ್ಯಾರ್ಥಿಗಳಾದ ಶ್ರೀವತ್ಸ ಕಾಮತ್, ರಾಘವೇಂದ್ರ ಕುಮಾರ್ ಭಟ್, ಹಾಗು ಶ್ರೀಧರ್ ಭಟ್ ಆಯ್ಕೆಯಾಗಿರುತ್ತಾರೆ
ಸಂಸ್ಥೆಯು ಪದವಿಯಲ್ಲಿ ಕಲಿಯುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಗಾಗಿ ವಿಶೇಷವಾದ ತರಬೇತಿಯನ್ನು ನೀಡುತ್ತಿದ್ದು, ಪದವಿಯ ಮೊದಲ ಸೆಮಿಸ್ಟರ್ ನಿಂದಲೇ ತರಬೇತಿಯನ್ನು ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆ, ಭಾಷಾ ಪರಿಣಿತಿ, ಅಣುಕು ಸಂದರ್ಶನ ಹೀಗೆ ಹಲವು ವಿಷಯಗಳಲ್ಲಿ ನುರಿತ ತಜ್ಞರಿಂದ ತರಬೇತಿಯನ್ನು ನೀಡಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯ ಸಂದರ್ಶನವನ್ನು ಎದುರಿಸಲು ಸಹಾಯವಾಗುತ್ತಿದೆ.
ಈಗಾಗಲೇ ಹಲವು ಕಂಪನಿಗಳಿಗೆ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ ಶೆಟ್ಟಿ ಮತ್ತು ಕಾಲೇಜಿನ ಪ್ರಾಶುಪಾಲೆ ಡಾI ಪ್ರತಿಭಾ ಎಂ. ಪಟೇಲ್, ಇದು ವಿದ್ಯಾರ್ಥಿಗಳ ಹಾಗು ಸಂಸ್ಥೆಯ ಅವಿರತ ಪ್ರಯತ್ನಕ್ಕೆ ಸಂದ ಫಲ ಎಂದು ಶ್ಲಾಗಿಸಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಉಪ ಪ್ರಾಂಶುಪಾಲರು ಮತ್ತು ಪ್ಲೇಸ್ಮೆಂಟ್ ಆಫೀಸರ್ ಪ್ರೊ.ಜಯಶೀಲ್ ಕುಮಾರ್ ಮತ್ತು ಅಸಿಸ್ಟೆಂಟ್ ಪ್ಲೇಸ್ಮೆಂಟ್ ಆಫೀಸರ್ ಪ್ರೊ.ರಾಜೇಶ್ವರಿ ಶೆಟ್ಟಿ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಸ್ಥೆಯಲ್ಲಿನ ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹೆಮ್ಮೆಯಿಂದ ಶುಭ ಹಾರೈಸಿದ್ದಾರೆ.

