ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಲಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಕೊಡ್ಲಿ ಜನರ ಹಲವಾರು ವರ್ಷಗಳ ಜನರ ಬೇಡಿಕೆಯಾದ ರಿಂಗ್ ರೋಡ್ ಕಾಮಗಾರಿ ಬರದಿಂದ ಸಾಗುತ್ತಿದ್ದು, ಮುಖ್ಯವಾಗಿ ಜನರ ಸಂಪರ್ಕದ ಕೊಂಡಿ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮನೆ ಇರುವಂತಹ ಕಡೆಗಳಲ್ಲಿ ಮೂಲ ಸೌಕರ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಿಂಗ್ ರೋಡ್ ಅವಶ್ಯಕವಾಗಿದ್ದು ಇದರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದರು
ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜಿ., ಪುರಸಭಾ ಅಧ್ಯಕ್ಷ ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯರಾದ ಸಂದೀಪ್ ಖಾರ್ವಿ, ಶೇಖರ್ ಖಾರ್ವಿ, ಸಂತೋಷ್ ಶೆಟ್ಟಿ ಮಾಜಿ ಸದಸ್ಯ ಪ್ರಕಾಶ್ ಖಾರ್ವಿ, ರವಿರಾಜ್ ಖಾರ್ವಿ, ಸ್ಥಳೀಯರಾದ ಚೇತನ್ ಖಾರ್ವಿ, ಸುನೀಲ ಖಾರ್ವಿ ಹಾಗೂ ಖಾರ್ವಿ ಸಮಾಜದ ಮುಖಂಡರು, ಗುತ್ತಿಗೆದಾರರು, ಸಂಬಂಧಪಟ್ಟ ಅಧಿಕಾರಿಗಳ ವರ್ಗದವರು ಉಪಸ್ಥಿತರಿದ್ದರು.

