Home » ಶ್ರೀ ಅಘೋರೇಶ್ವರ ಕಲಾರಂಗಕ್ಕೆ ನಿತ್ಯಾನಂದ ನಾಯರಿ ಸಾರಥಿ
 

ಶ್ರೀ ಅಘೋರೇಶ್ವರ ಕಲಾರಂಗಕ್ಕೆ ನಿತ್ಯಾನಂದ ನಾಯರಿ ಸಾರಥಿ

by Kundapur Xpress
Spread the love

ಕೋಟ: ಶ್ರೀ ಅಘೋರೇಶ್ವರ ಕಲಾರಂಗ ಕಾರ್ತಟ್ಟು ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ನಿತ್ಯಾನಂದ ನಾಯರಿ ಕಾರ್ತಟ್ಟು ಆಯ್ಕೆಯಾಗಿದ್ದಾರೆ.
ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಗೌರವಧ್ಯಾಕ್ಷರಾಗಿ ಚಂದ್ರ ಶೇಖರ ಕಾರಂತ ಕಾರ್ತಟ್ಟು ಉಪಾಧ್ಯಕ್ಷರಾಗಿ ಶ್ಯಾಮ ಸುಂದರ್ ನಾಯರಿ ,ಕಾರ್ಯದರ್ಶಿ ಶಿವಾನಂದ ನಾಯರಿ, ಕೋಶಾಧಿಕಾರಿ ಶ್ರೀಮತಿ ರೇವತಿ ಶ್ಯಾಮ ಸುಂದರ್, ಸಂಘಟನಾ ಕಾರ್ಯದರ್ಶಿಗಳಾಗಿ ರಾಧಾಕೃಷ್ಣ ಬ್ರಹ್ಮಾವರ, ಕ್ರೀಡಾ ಕಾರ್ಯದರ್ಶಿ ಸತ್ಯನಾರಾಯಣ ಆಚಾರ್, ಸಾಂಸ್ಕ್ರತಿಕ ಕಾರ್ಯದರ್ಶಿಗಳಾಗಿ ಸ್ನೇಹ ವೆಂಕಟೇಶ್ ಆಯ್ಕೆಯಾದರು. ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತ ಬಂದಿರುವ ಸಂಸ್ಥೆಯು ಅಶಕ್ತರಿಗೆ ಆರ್ಥಿಕ ನೆರವು, ಬಡ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ಪ್ರತಿಭಾ ಪುರಸ್ಕಾರ ಮುಂತಾದ ಕಾರ್ಯಗಳನ್ನು ಮಾಡುತ್ತ ಸಂಸ್ಥೆಯು ಎಪ್ರಿಲ್ ತಿಂಗಳಿನಲ್ಲಿ ವಾರ್ಷಿಕೋತ್ಸವ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಿತು. ಎಂದು ಕಲಾರಾಂಗದ ಜೊತೆ ಕಾರ್ಯದರ್ಶಿ ನಾಗರಾಜ್ ಐತಾಳ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು

 

Related Articles

error: Content is protected !!