ಕುಂದಾಪುರ : ಮುಂದಿನ ಪೀಳಿಗೆಗೆ ಕನ್ನಡ ರಾಜ್ಯೋತ್ಸವದ ಅರಿವು ಮೂಡಿಸಬೇಕು 70ನೆಯ ಕನ್ನಡ ರಾಜ್ಯೋತ್ಸವದ ದಿನಾಚರಣೆ ಕುಂದಾಪುರ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ ಕುಂದಾಪುರ ಇವರಿಂದ ಆಯೋಜಿಸಲಾದ ಕನ್ನಡ ಹಬ್ಬದ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನ್ನಡ ರಾಜ್ಯೋತ್ಸವವನ್ನು ಸ್ಥಳೀಯವಾಗಿರುವ ಎಲ್ಲ ಶಾಲಾ ಮಕ್ಕಳು ಮುಂದಿನ ದಿವಸ ಭಾಗಿಯಾಗುವಂತೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳು ಸೂಚಿಸಿ ಪ್ರತಿ ವರ್ಷವೂ ಬೇರೆ ಬೇರೆ ಶಾಲೆಯಲ್ಲಿ ನಾವೆಲ್ಲ ಆಚರಿಸುವಂತಹ ವಾಲ್ಮೀಕಿ ಜಯಂತಿ ಇರಬಹುದು ಹೀಗೆ ಬೇರೆ ಬೇರೆ ದಿನಾಚರಣೆಯನ್ನು ಆಚರಿಸುದರೊಂದಿಗೆ ಮಕ್ಕಳಿಗೆ ಇದರ ಮಹತ್ವವನ್ನು ತಿಳಿಸಿ, ದೇಶ ಪ್ರೇಮದ ಜೊತೆಗೆ ಮತ್ತು ನಾಡಿನ ಬಗ್ಗೆ ಅರಿವು ಮೂಡಿಸುವಂತಹ ಆಗಬೇಕು ಎಂದರು.
ರಾಜ್ಯೋತ್ಸವದ ಸಂದೇಶ ಹಾಗೂ ಧ್ವಜಾರೋಹಣವನ್ನು ಶ್ರೀಮತಿ ರಶ್ಮಿ ಎಸ್.ಆರ್.ಕ.ಆ.ಸೇ. ಸಹಾಯಕ ಆಯುಕ್ತರು ಕುಂದಾಪುರ ಉಪ ವಿಭಾಗ ನೆರವೇರಿಸಿದರು.
ಈ ಕಾರ್ಯಕ್ರಮದ ಘನ ಉಪಸ್ಥಿತಿಯಲ್ಲಿ ಮೋಹನ್ ದಾಸ್ ಶೆಣೈ ಅಧ್ಯಕ್ಷರು ಪುರಸಭೆ ಕುಂದಾಪುರ, ವಿನೋದ್ ಕ್ರಾಸ್ತಾ ಅಧ್ಯಕ್ಷರು ಯೋಜನಾ ಪ್ರಾಧಿಕಾರ ಸಮಿತಿ ಕುಂದಾಪುರ,, ಎಚ್ ಹರಿಪ್ರಸಾದ್ ಶೆಟ್ಟಿ ಅಧ್ಯಕ್ಷರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ,, ಎಚ್ ಡಿ ಕುಲಕರ್ಣಿ ಪೊಲೀಸ್ ಉಪಾಧೀಕ್ಷಕರು ಕುಂದಾಪುರ ಉಪವಿಭಾಗ,, ಮಹೇಶ್ ಕೆ ಜಿ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಕುಂದಾಪುರ,, ಶ್ರೀಮತಿ ಎಚ್ ಶೋಭಾ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಕುಂದಾಪುರ,, ಆನಂದ ಜಿ ಮುಖ್ಯ ಅಧಿಕಾರಿ ಪುರಸಭೆ ಕುಂದಾಪುರ,, ಪ್ರದೀಪ್ ಕುರುಡೇಕರ್ ಎಸ್. ತಹಶೀಲ್ದಾರರು ಹಾಗೂ ಅಧ್ಯಕ್ಷರು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಕುಂದಾಪುರ ಮತ್ತು ಜನಪ್ರತಿನಿಧಿಗಳು ಊರಿನ ಗಣ್ಯರು,, ವಿದ್ಯಾರ್ಥಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು

