52
ಕಾಪು : ತಾಲೂಕು ಆಡಳಿತ ಸೌಧ (ಪ್ರಜಾಸೌಧ) ಇಲ್ಲಿ ಆಯೋಜಿಸಲಾದ “70ನೇ ಕನ್ನಡ ರಾಜ್ಯೋತ್ಸವ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುಂಡಲೀಕ ಮರಾಠೆ, ತಹಶೀಲ್ದಾರದ ಅನಂತ ಶಂಕರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ಕಾಪು ವೃತ್ತ ನಿರೀಕ್ಷಕರು ಹಾಗೂ ಕಾಪು ಪುರಸಭೆಯ ಸದಸ್ಯರು, ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

