221
ಉಡುಪಿ : ಯುವ ಸಮುದಾಯಕ್ಕೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು ಟೀಮ್ ನೇಶನ್ ಫಸ್ಟ್ (ರಿ.) ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇವರು ಆಯೋಜಿಸಿದ “ನಶಾ ಮುಕ್ತ ದೌಡ್” 25 ಕಿ.ಮೀ. ಮ್ಯಾರಥಾನ್ ಓಟಕ್ಕೆ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು

ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್, ಉದ್ಯಮಿಗಳಾದ ಪುರುಶೋತ್ತಮ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ, ಪೋಲಿಸ್ ಉಪಾದಧಿಕ್ಷಕರಾದ ದಿನಕರ್, ಮಲ್ಪೆ ವೃತ್ತ ನಿರೀಕ್ಷಕರಾದ ಮಂಜುನಾಥ್ ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು

