Home » ನವೋನ್ಮೇಶ 2025 ಉದ್ಘಾಟನೆ ಕಾರ್ಯಕ್ರಮ
 

ನವೋನ್ಮೇಶ 2025 ಉದ್ಘಾಟನೆ ಕಾರ್ಯಕ್ರಮ

by Kundapur Xpress
Spread the love

ಮೂಡ್ಲಕಟ್ಟೆ : ಐ ಎಮ್ ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು‌ ಸ್ಪರ್ದೆ ನವೋನ್ಮೇಶ 2025 ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಉದ್ಘಾಟಕರಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಖ್ಯಾತ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಆಗಮಿಸಿದ್ದರು. ಉದ್ಘಾಟನಾ ಭಾಷಣ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತ ಸಂಸ್ಥೆಯ ಸ್ಥಾಪಕರಾದ ದಿ.ಐ ಎಮ್. ಜಯರಾಮ್ ಶೆಟ್ಟಿ ಹಾಗೂ ಬೆಳವಣಿಗೆಗೆ ಕಾರಣೀಕರ್ತರಾದ ಶ್ರೀ ಸಿದ್ಧಾರ್ಥ್ ಜೆ ಶೆಟ್ಟಿ ಅವರನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕರಾವಳಿಯ ಖ್ಯಾತ ನಟ ಶ್ರೀ ದೀಪಕ್ ರೈ ಪಾಣಾಜೆ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಅಕಾಡಮಿಕ್ ಡೈರೆಕ್ಟರ್ ಡಾ. ಎಸ್ ಎನ್ ಭಟ್ ಅಧ್ಯಕ್ಷೀಯ ಭಾಷಣದಲ್ಲಿ ನವೋನ್ಮೇಶ ಪದದ ಅರ್ಥವನ್ನು ವಿವರಿಸಿ ಪ್ರತೀಭಾನ್ವೇಶಣೆಗೆ ಪೂರಕವಾದದ್ದು ಎಂದು ಹೇಳಿ ಕಾರ್ಯಕ್ರಮ ಆಯೋಜಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಐಎಮ್ ಜೆ ಐ ಎಸ್ ಸಿ ಪ್ರಾಂಶುಪಾಲೆ ಡಾ. ಪ್ರತಿಭಾ ಪಾಟೀಲ್ ನವೋನ್ಮೇಶ್ ೨೦೨೫ ಸ್ಪರ್ದೆಯ ರೂಪುರೇಷೆಗಳನ್ನು ವಿವರಿಸಿದರು. ಎಮ್ ಐ ಟಿ ಕೆ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಸ್ವಾಗತಿಸಿ , ಏಮ್ ಸಿ ಎನ್ ಪ್ರಾಂಶುಪಾಲೆ ಪ್ರೊಫೆಸರ್ ಜೆನಿಫ಼ರ್ ಫ಼್ರೀಡಾ ಮೆನೇಜಸ್ ವಂದಿಸಿದರು.ಡಾಟಾ ಸೈನ್ಸ್ ವಿಭಾಗದ ಮುಖ್ಯಸ್ಥರು ಪ್ರೊಫೆಸರ್ ಕಾರ್ತಿಕೇಯನ್ ಐ ಎಮ್‌ಜೆ ಸಮೂಹ ಸಂಸ್ಥೆಯ ಪರಿಚಯ ನೀಡಿದರು. ಪ್ರೊಫ಼ೆಸರ್ ಸೂಕ್ಷ್ಮ ಅಡಿಗ ಹಾಗೂ ಕಾಮರ್ಸ್ ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ಅರ್ಚನ ಉಪಧ್ಯಾಯ ಅತಿಥಿ ಪರಿಚಯ ಮಾಡಿ ,ಎಮ್ ಬಿ ಎ ವಿದ್ಯಾರ್ಥಿನಿ ಶಾಂಭವಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಪಿಯು ಕಾಲೇಜಿನ 1200ಕ್ಕೂ ಅಧಿಕ ವಿದ್ಯಾರ್ಥಿಗಳು ಹಲವು ಸ್ಪರ್ದೆಗಳಲ್ಲಿ ಭಾಗವಹಿಸಿದರು.ಅಲೈಡ್ ಹೆಲ್ಥ್ ಸೈನ್ಸ್ ಡೀನ್ ಡಾ.ಪದ್ಮಚರಣ್ ಹಾಗೂ ಅಲೈಡ್ ಸೈನ್ಸ್ ಪ್ರಾಂಶುಪಾಲೆ ಪ್ರೊಫೆಸರ್ ಹೇಮಲತ , ಎಲ್ಲಾ ಕಾಲೇಜಿನ ವಿದ್ಯಾರ್ಥಿ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Related Articles

error: Content is protected !!