Home » ಕಾಂಗ್ರೇಸ್‌ ಪಾಪಕ್ಕೆ ಶಿಕ್ಷೆ ನೀಡಿ
 

ಕಾಂಗ್ರೇಸ್‌ ಪಾಪಕ್ಕೆ ಶಿಕ್ಷೆ ನೀಡಿ

ಪಿ ಎಂ ಮೋದಿ

by Kundapur Xpress
Spread the love

ಹೊಸಪೇಟೆ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಮುಗಲಭೆ, ಬಾಂಬ್ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಗೊಳಿಸಿ ಹಲ್ಲೆ ನಡೆಸಲಾಯಿತು. ಚಿಕ್ಕೋಡಿ ಯಲ್ಲಿ ಜೈನಮುನಿಯ ಹತ್ಯೆಯಾಯಿತು. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ನಡೆದು, ಇಡೀ ದೇಶವೇ ಆತಂಕದಿಂದ ರಾಜ್ಯವನ್ನು ನೋಡುವಂತಾಯಿತು. ಕರ್ನಾಟಕ ಕಾಂಗ್ರೆಸ್‌ನ ಈ ಪಾಪಗಳಿಗೆ ಈ. ಚುನಾವಣೆಯಲ್ಲಿ ತಕ್ಕ ಶಿಕ್ಷೆ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ7ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕೈಗೊಂಡಿರುವ ಮೋದಿ, ಭಾನುವಾರ ಬೆಳಗಾವಿ, ಶಿರಸಿ, ದಾವಣಗೆರೆ ಹಾಗೂ ಹೊಸಪೇಟೆಗಳಲ್ಲಿ ಬೃಹತ್ ಸಮಾವೇಶ ನಡೆಸಿ, ಬಿಜೆಪಿ ಪರ ಪ್ರಚಾರ ನಡೆಸಿದರು.

   

Related Articles

error: Content is protected !!