109
ಕುಂದಾಪುರ : ರೈಲ್ವೇ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರೈಲು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಮೂಡ್ಲಕಟ್ಟೆಯ ರೈಲು ನಿಲ್ದಾಣದ ಸಮೀಪದಲ್ಲಿ ನಡೆದಿದೆ
ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ತುಂಡಾಗಿ ರೈಲ್ವೇ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿತ್ತು. ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮತ್ಸ ಗಂಧಾ ಎಕ್ಸ್ಪ್ರೆಸ್ ಮತ್ತು ಮಂಗಳೂರು-ಮಡಗಾಂವ್ ಪ್ಯಾಸೆಂಜರ್ ರೈಲು ಸಂಚಾರ ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಎರಡು ಗಂಟೆ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಬಳಿಕ ತುಂಡಾದ ವಿದ್ಯುತ್ ತಂತಿಗಳನ್ನು ಸರಿಪಡಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

