58
ಕುತ್ಯಾರು :ಯುವಕ ಮಂಡಲ (ರಿ.) ಕುತ್ಯಾರು ಇವರ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಳ್ಳಲಾದ “ಕ್ರೀಡಾಕೂಟ ಹಾಗೂ ಮುದ್ದುಕೃಷ್ಣ ವೇಷ ಸ್ಪರ್ಧೆ” ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕುತ್ಯಾರು ಅರಮನೆಯ ಜಿನೇಶ್ ಬಲ್ಲಾಳ್, ಉಲ್ಲಾಯ ಫ್ರೇಂಡ್ಸ್ ಅಧ್ಯಕ್ಷರಾದ ಭಾರ್ಗವ ತಂತ್ರಿ, ಶಿರ್ವ ಮಹಿಳಾ ಮಂಡಲ ಅಧ್ಯಕ್ಷರಾದ ಸ್ಪೂರ್ತಿ, ಕುತ್ಯಾರು ಯುವಕ ಮಂಡಲ ಅಧ್ಯಕ್ಷರಾದ ಮನೋಜ್ ಕುತ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿ ಧೀರಜ್ ಅಚಾರ್ಯ ಹಾಗೂ ಯುವಕ ಮಂಡಲ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

