Home » ಮಣೂರು ಚಿತ್ತಾರಿ ದೇಗುಲ ಸ್ವಚ್ಛತಾ ಕಾರ್ಯಕ್ರಮ
 

ಮಣೂರು ಚಿತ್ತಾರಿ ದೇಗುಲ ಸ್ವಚ್ಛತಾ ಕಾರ್ಯಕ್ರಮ

ಪಂಚವರ್ಣ ಸಂಘಟನೆ 239ನೇ ಪರಿಸರಸ್ನೇಹಿ ಅಭಿಯಾನ

by Kundapur Xpress
Spread the love

ಕೋಟ : ಇಲ್ಲಿನ ಮಣೂರಿನ ಚಿತ್ತಾರಿನ ನಾಗಬ್ರಹ್ಮ ಸಪರಿವಾರ ದೇಗುಲದ ವಾರ್ಷಿಕ ವರ್ಧಂತಿ ಉತ್ಸವದ ಅಂಗವಾಗಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ,ದೇಗುಲದ ಆಡಳಿತ ಮಂಡಳಿಯ ಸಹಯೋಗದೊಂದಿಗೆ ೨೩೯ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ ಹಮ್ಮಿಕೊಂಡಿತು.
ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ ಪ್ರಭು,ದೇಗುಲದ ಪ್ರಮುಖರಾದ ಗೋಪಾಲ್ ಪೈ,ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್,ಮಾಜಿ ಅಧ್ಯಕ್ಷ ದಿನೇಶ್ ಆಚಾರ್,ಗೌರವಾಧ್ಯಕ್ಷ ಸುರೇಶ್ ಆಚಾರ್,
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್,ನಿಯೋಜಿತ ಅಧ್ಯಕ್ಷ ಮನೋಹರ್ ಪೂಜಾರಿ,ಸಂಚಾಲಕ ಅಮೃತ್ ಜೋಗಿ,ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಮತ್ತಿತರರು ಉಪಸ್ಥಿತರಿದ್ದರು.ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

 

Related Articles

error: Content is protected !!