100
ಕೋಟ ಪಂಚವರ್ಣ ಯುವಕಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ವತಿಯಿಂದ ಸದಸ್ಯರ ಹುಟ್ಟುಹಬ್ಬಕ್ಕೆ ವಿಶೇಷ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಈ ಹಿನ್ನಲ್ಲೆಯಲ್ಲಿ ಸಂಸ್ಥೆಯ ಸದಸ್ಯರಾದ ಪ್ರಶಾಂತ್ ಪಡುಕರೆ,ಗೌರವ ಸಲಹೆಗಾರ ಶಿವಮೂರ್ತಿ ಉಪಾಧ್ಯಾ ಇವರ ಹುಟ್ಟು ಹಬ್ಬದ ಅಂಗವಾಗಿ ಹೊಸಬದುಕು ಆಶ್ರಮದ ಮುಖ್ಯಸ್ಥ ಹೊಸಬದುಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಇವರಿಗೆ 20 ಕೆ.ಜಿ.ಉಪ್ಪಿನಕಾಯಿಯನ್ನು ಹಸ್ತಾಂತರಿಸಲಾಯಿತು.
ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ,ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಶೋಭಾ ಗಣೇಶ್ ಮತ್ತಿತರರು ಇದ್ದರು.

