44
ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಯಾರು ಸೂರ್ಯನಗರದ ಕೊರಗ ಸಮುದಾಯದ ವರಿಗೆ ಮಲ್ಟಿ ಪರ್ಪಸ್ ಸೆಂಟರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುದಾನದಿಂದ 60 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಸದಸ್ಯರಾದ ಗಣೇಶ್ ಶೆಟ್ಟಿ ಪೈಯಾರು, ಸಂಪತ್ ಹಾಗೂ ಸ್ಥಳೀಯರಾದ ಶಿವರಾಮ್ ಶೆಟ್ಟಿ, ಪ್ರಭಾಕರ್, ರಾಜೇಶ್ ಉಪಸ್ಥಿತರಿದ್ದರು.

