229
ಉಡುಪಿ : ರಾಜ್ಯ ಕಾಂಗ್ರೆಸ್ ಸರಕಾರ ದಲಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11,000 ಕೋಟಿ ರೂಪಾಯಿಗಳನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಗೆ ವರ್ಗಾವಣೆ ಮಾಡಿರುವುದನ್ನು ಖಂಡಿಸಿ, ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಮತ್ತು ಎಸ್ಟಿ ಮೋರ್ಚಾ ನೇತೃತ್ವದಲ್ಲಿ ಇಂದು ಆಗಸ್ಟ್ 10 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ-ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ.

