154
ಬಸ್ರೂರು : ಗ್ರಾಮದ ಶ್ರೀ ಕಾಳಿ ಭಜನಾ ಮಂಡಳಿಯ ಹತ್ತನೇ ತರಗತಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಕ್ಯೋಪಾಧ್ಯಾಯರಾದ ದಿನಕರ್ ಆರ್ ಶೆಟ್ಟಿ ಹಾಗೂ ಶ್ರೀ ಕಾಳಿ ಭಜನಾ ಮಂಡಳಿಯವರ ಜಂಟಿ ಸಹಯೋಗದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿನಕರ್ ಆರ್ ಶೆಟ್ಟಿ ವಹಿಸಿದ್ದು, ವಿದ್ವಾನ್ ಮಾಧವ ಅಡಿಗ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮುಖ್ಯ ಅತಿಥಿಗಳಾಗಿ ರಾಧಾಕೃಷ್ಣ ಶೆಟ್ಟಿ, ಶಿವರಾಮ ಪೂಜಾರಿ, ಬೇಬಿ ಶ್ರೀಕಾಂತ್ ಹಾಗೂ ಚಂದ್ರ ಪೂಜಾರಿ ಉಪಸ್ಥಿತರಿದ್ದರು. ಕೆ. ವಿಕಾಸ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

