ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ : ಕರ್ನಾಟಕ ಪ್ರೆಸ್ ಕ್ಲಬ್ ತೀವ್ರ ಖಂಡನೆ

by Kundapur Xpress
Spread the love

ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ : ಕರ್ನಾಟಕ ಪ್ರೆಸ್ ಕ್ಲಬ್ ತೀವ್ರ ಖಂಡನೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ತೀವ್ರವಾಗಿ ಖಂಡಿಸುತ್ತದೆ.

ವರದಿಗಾರ ಶ್ರೀಕಾಂತ್ ಹೆಮ್ಮಾಡಿಯವರು ಕಳೆದ ಕೆಲವು ದಿನಗಳ ಹಿಂದೆ ಕನ್ನಡಪ್ರಭ ಪತ್ರಿಕೆಯಲ್ಲಿ ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಸರ್ಜನ್ ಅವರ ಭ್ರಷ್ಟಾಚಾರ ಆರೋಪ ವರದಿಯನ್ನು ಮಾಡಿರುತ್ತಾರೆ.

ಸದ್ರಿ ವರದಿ ಪ್ರಕಟವಾದ ಬಳಿಕ ಸರ್ಜನ್ ವೈದ್ಯರಾದ ಮಹೇಂದ್ರ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನ ಹಾಗೂ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಅಲ್ಲದೆ ಜೀವ ಬೇದರಿಕೆ ಹಾಕಿರುತ್ತಾರೆ. ಎಂದು ಶ್ರೀಕಾಂತ್ ಹೆಮ್ಮಾಡಿ ತಿಳಿಸಿರುತ್ತಾರೆ.

ಬೆಳಿಗ್ಗೆ ಶ್ರೀಕಾಂತ್ ಹೆಮ್ಮಾಡಿ ಖಾಸಗಿ ಹೋಟೆಲ್ ನಲ್ಲಿ ತಿಂಡಿ ತಿನ್ನುತ್ತಿರುವ ಸಂದರ್ಭದಲ್ಲಿ ಅಲ್ಲಿಗೆ ಬಂದ ವೈದ್ಯಧಿಕಾರಿ ಮಹೇಂದ್ರ ಶೆಟ್ಟಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಮೇಲೆ ಏಕಾಏಕಿ ದೈಹಿಕ ಹಲ್ಲೆ ಮಾಡಿರುತ್ತಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related Articles

error: Content is protected !!