245
ಬಿ ಜೆ ಪಿ ವಿಜಯೋತ್ಸವ
ಮಂಗಳೂರು: ತ್ರಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಗುರುವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ತಿಂಡಿ ಹಂಚಿ ವಿಜಯೋತ್ಸವ ಆಚರಿಸಿದರು.
ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರು ಮಾತನಾಡಿ,ತ್ರಿಪುರ ಮತ್ತು ನಾಗಾಲ್ಯಾಂಡ್ ದೇಶದ ಭಾಗವೇ ಆಗಿದ್ದರೂ ಈಶಾನ್ಯ ರಾಜ್ಯಗಳಿಗೆ ವಿದ್ಯುತ್, ರಸ್ತೆ , ರೈಲು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸದೆ ದೇಶದಿಂದ ಬೇರ್ಪಡಿಸುವ ಕೆಲಸ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ಸರಕಾರ ಮಾಡಿತ್ತು.
ಆದರೆ ನರೇಂದ್ರ ಮೋದಿ ಅವರು ದೇಶದ ಆಡಳಿತ ವಹಿಸಿಕೊಂಡ ಬಳಿಕ, ದೇಶದ ಭೌಗೊಳಿಕ ವ್ಯವಸ್ಥೆ, ಗಡಿಯನ್ನು ಸಂರಕ್ಷಣೆಗೆ ಮಾಡುವ ಕೆಲಸವನ್ನು ಮಾಡಿದ್ದಾರೆ ಎಂದರು ವಿಜಯೋತ್ಸವ ಸಂಭ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು

